Friday, June 27, 2025
spot_imgspot_img
spot_imgspot_img

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ವ್ಯಕ್ತಿ ಸಾವು..!

- Advertisement -
- Advertisement -

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ, ಕಾರ್ಮಿಕನೋರ್ವ ವಿದ್ಯುತ್‌ಶಾಕ್‌ಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ(49ವ) ಮೃತಪಟ್ಟವರು. ಮುಂಜಾನೆ ಸ್ಥಳೀಯ ನಿವಾಸಿ ಬೊಮ್ಮಣ್ಣ ಗೌಡ ಎಂಬವರ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದು ತೋಟದಲ್ಲಿ ಸೊಪ್ಪು ಕಡಿಯಲು ಅಲ್ಯೂಮಿನಿಯಂ ಏಣಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್‌ಲೈನ್‌ಗೆ ತಾಗಿ ವಿದ್ಯುತ್‌ಶಾಕ್‌ ತಗಲಿ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರೆನ್ನಲಾಗಿದೆ.

ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ ಯಾವುದೇ ಪ್ರಯೋಜನವಾಗದೆ ಅವರು ದಾರಿ ಮಧ್ಯೆ ಮೃತಪಟ್ಟಿದ್ದರೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!