- Advertisement -
- Advertisement -
ಸುಳ್ಯ: ಚಿನ್ನಾಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶ ಪಡೆದು ನ್ಯಾಯಾಲಕ್ಕೆ ಹಾಜರು ಪಡಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಆರೋಪಿಯನ್ನು ಪೆರಿಯತ್ತಡ್ಕ, ಹೊಸದುರ್ಗ, ಕಾಸರಗೋಡು ನಿವಾಸಿಯಾದ ಆಸೀಮ್@ ಆಸೀಮ್ ಖುನಿಯ, ಬಿನ್ ಹಸನ್ ತಂಗಳ್ (43) ಎಂದು ಗುರುತಿಸಲಾಗಿದೆ.
ಅಂದಾಜು ರೂ 15,13,391/- ಮೌಲ್ಯದ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು, ಆರೋಪಿಯನ್ನು ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಜಾಲ್ಸೂರಿನ ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- Advertisement -