Saturday, June 28, 2025
spot_imgspot_img
spot_imgspot_img

ಮಕ್ಕಳಾಗಿಲ್ಲವೆಂಬ ಕೊರಗಿನಿಂದ ಮಹಿಳೆ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಗೃಹಿಣಿವೊಬ್ಬರು ನೀರಿನ ಸಂಪ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲ ತಾಲೂಕಿನ ವೀರ ರಾಘವನಪಾಳ್ಯದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಸವಿತಾ(38) ಎಂದು ಗುರುತಿಸಲಾಗಿದೆ.

12 ವರ್ಷದ ಹಿಂದೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರೆಗೂಡು ಗ್ರಾಮದ ರವಿಕುಮಾರ್ ಎಂಬುವವರ ಜೊತೆ ಮದುವೆಯಾಗಿತ್ತು. ಇನ್ನು ಕಳೆದ ಎರಡು ವರ್ಷಗಳಿಂದ ನೆಲಮಂಗಲದಲ್ಲಿ ದಂಪತಿ ವಾಸವಿದ್ದರು. 12 ವರ್ಷವಾದರೂ ಮಕ್ಕಳಾಗಿಲ್ಲವೆಂಬ ಕೊರಗು ಹೊಂದಿದ್ದ ಗೃಹಿಣಿ ಸವಿತಾ, ಪತಿ ಬಳಿ ಮಕ್ಕಳಿಲ್ಲದ ವಿಷಯ ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ತೀವ್ರ ಮನನೊಂದಿದ್ದ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ಬಾರಿ ಪತ್ನಿಗೆ ಪೋನ್ ಮಾಡಿದರೂ ಕರೆ ಸ್ವೀಕರಿಸದ ಹಿನ್ನಲೆ ಮನೆ ಬಳಿ ಬಂದು ಹುಡುಕುವ ವೇಳೆ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!