Friday, June 27, 2025
spot_imgspot_img
spot_imgspot_img

ಬಂಟ್ವಾಳ: ನಗ-ನಗದು ಕಳವು ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!

- Advertisement -
- Advertisement -

ಬಂಟ್ವಾಳ: ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪತ್ತೆಹಚ್ಚಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಅಶ್ರಪ್‌ ಆಲಿ ಮತ್ತು ಬೆಂಗ್ರೆಯ ಕಬೀರ್‌ ಎಂದು ಗುರುತಿಸಲಾಗಿದೆ.

ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲು ನಿವಾಸಿ ಮೊಹಮ್ಮದ್‌ ಜಾಪರುಲ್ಲಾ ಎಂಬವರ ಮನೆಯಲ್ಲಿ ನಡೆದ ಕಳವಾದ ರೂ. 27,50,000/-ನಗದು ಹಾಗೂ ರೂ 4,96,000 /-ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ, ಆರೋಪಿಗಳಿಂದ ಸುಮಾರು 4,50,000/- ಮೌಲ್ಯ ಚಿನ್ನ ಮತ್ತು ರೂ 4,00,000/-ನಗದನ್ನು ವಶಪಡಿಸಿಕೊಂಡಿರುತ್ತಾರೆ.

- Advertisement -

Related news

error: Content is protected !!