Saturday, June 28, 2025
spot_imgspot_img
spot_imgspot_img

ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್; ಗೃಹಿಣಿ ಮೃತ್ಯು

- Advertisement -
- Advertisement -

ದ್ವಿಚಕ್ರವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರರು ನೆಲಕ್ಕೆ ಬಿದ್ದಿದ್ದು ಬಿಎಂಟಿಸಿ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಒಂದೂವರೆ ವರ್ಷದ ಮಗು ಗಾನವಿ ಮತ್ತು ಪತಿ ಗುರುಮೂರ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಫ್ಲೈ ಓವರ್‌ನಲ್ಲಿ ನಡೆದಿದೆ.

ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆ ಚಾಲನೆಯಿಂದ ಅಪಘಾತ ಆಗಿರುವ ಆರೋಪ ಕೇಳಿಬಂದಿದೆ. ಪತಿ ಗುರುಮೂರ್ತಿ ಸಿಂಗಸಂದ್ರ ಬೆಸ್ಕಾಂ ಉದ್ಯೋಗಿ ಆಗಿದ್ದಾರೆ. ಕಳೆದ 8 ವರ್ಷದಿಂದ ಬೆಸ್ಕಾಂನಲ್ಲಿ ಲೈನ್ ಮೆನ್ ಆಗಿ‌‌ ಕೆಲಸ ಮಾಡುತ್ತಿದ್ದರು. ಮೂಲತಃ ವಿಜಯನಗರ ಜಿಲ್ಲೆಯ ಗುಡೇಕೋಟೆ ಕೂಡ್ಲಿಗಿಯ ಶ್ರೀಕಂಠಪುರ ತಾಂಡದ ನಿವಾಸಿಗಳು. ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು‌ ನೆಲೆಸಿದ್ದರು.

ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತ ಗೃಹಿಣಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತ ಮಾಡಿ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ ಬಿಟ್ಟು ಪರಾರಿ ಆಗಿದ್ದಾರೆ.

- Advertisement -

Related news

error: Content is protected !!