Sunday, June 29, 2025
spot_imgspot_img
spot_imgspot_img

ಮಂಗಳೂರು: ಗ್ಯಾಸ್‌ ಸಿಲಿಂಡರ್‌ ಸಬ್ಸಿಡಿಗೆ KYC ಮಾಡಿಸಿ ಎಂಬ ಸಂದೇಶ ಬಂದಿದೆಯೇ ಹಾಗಾದರೆ ಇಲ್ಲಿ ಗಮನಿಸಿ.

- Advertisement -
- Advertisement -

ಮಂಗಳೂರು: ಅಡುಗೆ ಅನಿಲ ಸಂಪರ್ಕ ಇರುವವರು ಡಿ.31ರೊಳಗೆ ಗ್ಯಾಸ್ ಏಜೆನ್ಸಿ ಬಳಿ ಕೆವೈಸಿ ಮಾಡಿಸಬೇಕು, ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಬರುತ್ತದೆ ಎಂಬ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಆಧಾರ್ ದೃಢೀಕರಣ ಕಡ್ಡಾಯವಾಗಿದೆ ಎಂದು ಆಹಾರ ಇಲಾಖೆ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಉಜ್ವಲ ಗ್ಯಾಸ್ ಸಂಪರ್ಕ ಹೊರತಾದ ಬಳಕೆದಾರರಿಗೆ ಗ್ಯಾಸ್ ಸಬ್ಸಿಡಿಯ ಬಗ್ಗೆ ಪ್ರಸ್ತುತ ಯಾವುದೇ ಘೋಷಣೆ ಆಗಿಲ್ಲ. ಗ್ಯಾಸ್ ಬಳಕೆದಾರರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!