Sunday, June 29, 2025
spot_imgspot_img
spot_imgspot_img

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಯನ್ನು ಕೊಲೆಗೈದ ಪತಿ..!

- Advertisement -
- Advertisement -

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ಘಟನೆ ನಡೆದಿದೆ.

ಕೊಲೆಯಾದ ಮಹಿಳೆ ರಮ್ಯ (38) ಹಾಗೂ ಪತಿ ನಾಗಭೂಷಣ ಎಂದು ಗುರುತಿಸಲಾಗಿದೆ.

ಕೊಲೆಯಾದ ರಮ್ಯಾ ಈ ಮೊದಲು ವಿವಾಹವಾಗಿ ವಿಚ್ಛೇದನ ನೀಡಿದ್ದಳು. ನಾಗಭೂಷಣ ಸಹ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಮ್ಯ ಜೊತೆ ಎರಡನೇ ಮದುವೆಯಾಗಿದ್ದನು. ಕಳೆದ ಮೂರು ವರ್ಷದ ಹಿಂದೆ ದೇವಸ್ಥಾನದಲ್ಲಿ ಇಬ್ಬರು ಮದುವೆಯಾಗಿದ್ದರು. ಚಿಕ್ಕಬಳ್ಳಾಪುರ ಮೂಲದ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ನಾಗಭೂಷಣ್, ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡಿದ್ದನು. ಬೆಂಗಳೂರಿನಲ್ಲಿ ಮತ್ತೊಬ್ಬ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂದು ರಮ್ಯ ಅನುಮಾನ ಪಟ್ಟಿದ್ದಳು ಎಂದು ತಿಳಿದು ಬಂದಿದೆ. ಪತಿಯ ಅನೈತಿಕ ಸಂಬಂಧ ವಿಷಯ ಪತ್ನಿಗೆ ತಿಳಿದು ಇಬ್ಬರ ನಡುವೆ ಜಗಳ ಉಂಟಾಗಿದೆ. ಜಗಳ ವಿಕೋಪಕ್ಕೆ ತಿರುಗಿಪತಿ ನಾಗಭೂಷಣ ಪತ್ನಿಯನ್ನು ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಪತ್ನಿಯನ್ನು ಕೊಲೆಗೈದು ಪತಿ ನಾಗಭೂಷಣ್ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಈ ಘಟನೆ ಕುರಿತು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!