Sunday, June 29, 2025
spot_imgspot_img
spot_imgspot_img

ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

- Advertisement -
- Advertisement -

ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ 10 ಜನರನ್ನು ನೇಮಕ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ನಾಲ್ವರು, 10 ಜನ ರಾಜ್ಯ ಕಾರ್ಯದರ್ಶಿಗಳ ನೇಮಕ ಮಾಡಲಾಗಿದೆ.

ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸಿ. ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜು, ಎಸ್ ಟಿ ಮೋರ್ಚಾ ಅಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್ಸಿ ಮೋರ್ಚಾ ಅಧ್ಯಕ್ಷರಾಗಿ ಶಾಸಕ ಸಿಮೆಂಟ್ ಮಂಜು, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾ ಅಧ್ಯಕ್ಷರಾಗಿ ಎ ಎಸ್ ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಅನಿಲ್ ಥಾಮಸ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಮುರುಗೇಶ್ ನಿರಾಣಿ, ಬೈರತಿ ಬಸವರಾಜ, ರಾಜುಗೌಡ, ಎಂ. ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ನಾಯಕ್, ಡಾ. ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ಖಜಾಂಚಿಯಾಗಿ ಸುಬ್ಬ ನರಸಿಂಹ, ಪ್ರಧಾನ ಕಾರ್ಯದರ್ಶಿಗಳಾಗಿ ವಿ. ಸುನಿಲ್ ಕುಮಾರ್, ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಂ ಗೌಡ. ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾಗಿ ಶೈಲೇಂದ್ರ ಬೆಲ್ದಾಳೆ, ಡಿ.ಎಸ್. ಅರುಣ್, ಬಸವರಾಜ ಮತ್ತಿಮೂಡ್, ಸಿ. ಮುನಿರಾಜು, ವಿನಯ ಬಿದರೆ, ಬ್ರಿಜೇಶ್ ಚೌಟ, ಶರಣು ತಳ್ಳಿಕೆರೆ, ಲಲಿತಾ ಅನಾಪುರ, ಲಕ್ಷ್ಮಿ ಅಶ್ವಿನಿ ಗೌಡ, ಅಂಬಿಕಾ ಅವರನ್ನು ನೇಮಕ ಮಾಡಲಾಗಿದೆ.

- Advertisement -

Related news

error: Content is protected !!