Monday, June 30, 2025
spot_imgspot_img
spot_imgspot_img

ಹೆತ್ತವರ ಕಣ್ಣ ಮುಂದೆಯೇ ಹರಿತು ಮಗಳ ನೆತ್ತರು!

- Advertisement -
- Advertisement -

ಹೆತ್ತವರ ಕಣ್ಣ ಮುಂದೆಯೇ ಅಳಿಯ ಮಗಳನ್ನು ಕೊಂದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲ ನಿವಾಸಿ ಆರೋಪಿ ಪತಿ ರೇವಣಪ್ಪ ಕಳೆದ ಐದು ವರ್ಷದ ಹಿಂದೆ ರಾಣೇಬೆನ್ನೂರು ತಾಲ್ಲೂಕಿನ ಹುಲಿಹಳ್ಳಿ ಗ್ರಾಮದ ಪವಿತ್ರಾ ಎನ್ನುವ ಯುವತಿಯನ್ನು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದ. ಆರಂಭದಲ್ಲಿ ಎಲ್ಲವೂ ಚೆನ್ನಾಗಿ ಇತ್ತು. ಆದರೆ, ಬರು ಬರುತ್ತಾ ಮದ್ಯದ ದಾಸನಾದ ರೇವಣಪ್ಪ ನಿತ್ಯ ಕುಡಿದ ಅಮಲಿನಲ್ಲಿ ಜಗಳ ವಾಡುತ್ತಿದ್ದನಂತೆ. ನೆರೆ-ಹೊರೆಯವರ ಜೊತೆ ಮಾತನಾಡಿದ್ರು, ಸಂಬಂಧ ಕಲ್ಪಿಸಿ ಜಗಳ ವಾಡುತ್ತಾ ಕಿರಿಕಿರಿ ಮಾಡುತ್ತಿದ್ದ. ಆದರೆ, ಈ ಎಲ್ಲವನ್ನು ಸಹಿಸಿಕೊಂಡು ಕಳೆದ ಐದು ವರ್ಷದಿಂದ ಪವಿತ್ರ ಸಂಸಾರ ನಿಭಾಯಿಸಿಕೊಂಡು ಬಂದಿದ್ದಳು. ಇದರ ಪ್ರತಿಫಲವಾಗಿ ಎರಡು ಮುದ್ದಾದ ಹೆಣ್ಣುಮಕ್ಕಳು ಇದ್ದಾರೆ.

ಪವಿತ್ರಾ ಹಸಿ ಬಾಣತಿ ಐದು ತಿಂಗಳ ಕಂದಮ್ಮನ ಜೊತೆಗೆ ಏಕಾದಶಿ ಹಿನ್ನೆಲೆ ಶಿವನ ದರ್ಶನಕ್ಕೆ ದೇವಸ್ಥಾನಕ್ಕೆ ಹೋಗಿದ್ದಳು. ತನ್ನ ಗಂಡ ತನ್ನ ತವರು ಮನೆಗೆ ಬಂದಿದ್ದಾನೆ ಎಂದು ಸುದ್ದಿ ಕೇಳಿದ ತಕ್ಷಣ ಪವಿತ್ರ, ನನ್ನ ಗಂಡ ನನ್ನ ಮಕ್ಕಳನ್ನು ಎತ್ತಿಕೊಂಡು ಮುದ್ದಾಡುತ್ತಾನೆ ಎಂಬ ಆಸೆಯಿಂದ ಧಾವಂತದಲ್ಲಿ ಮನೆಗೆ ಬಂದಿದ್ದಳು. ಆದ್ರೆ, ಪಾಪಿ ಪತಿ ಅನುಮಾನ ಎಂಬ ಭೂತವನ್ನು ತಲೆಗೆ ಹಚ್ಚಿಕೊಂಡು ಕುಡಿದ ಮತ್ತಿನಲ್ಲಿ ಆಕೆಯ ಪೋಷಕರ ಎದುರೇ ಕೊಲೆ ಮಾಡಿದ್ದಾನೆ.

ಒಟ್ಟಾರೆ ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತಾಗಿದೆ ಈ ಘಟನೆ. ಕಣ್ಣು ಅರಳಿಸಿ ಪ್ರಪಂಚ ನೋಡುವ ಮುನ್ನವೇ ಈ ಮುದ್ದಾದ ಹೆಣ್ಣು-ಮಕ್ಕಳು ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ತಾಯಿ ಮಸಣಕ್ಕೆ ಹೋದರೆ, ತಂದೆ ಕೃಷ್ಣನ ಜನ್ಮಸ್ಥಳಕ್ಕೆ ಹೋಗಿದ್ದಾನೆ. ಆದರೆ, ಈ ಮಕ್ಕಳನ್ನು ನೋಡಿದರೆ ಎಂತಹ ಕಲ್ಲು ಹೃದಯದವರ ಮನಸ್ಸು ಕೂಡ ಕರಗುತ್ತದೆ. ತಂದೆಯ ತಪ್ಪಿನಿಂದ ಇದೀಗ ಮಕ್ಕಳು ಕೊರಗುವಂತಾಗಿದೆ.

- Advertisement -

Related news

error: Content is protected !!