- Advertisement -
- Advertisement -
ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾಸನ ತಾಲ್ಲೂಕಿನ, ಗೊರೂರಿನ ಹೇಮಾವತಿ ಜಲಾಶಯದ ಬಳಿ ನಡೆದಿದೆ. ನಿತ್ಯ (19) ಸಾವನ್ನಪ್ಪಿದ ದುರ್ದೈವಿ.
ನಿತ್ಯ ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿ, ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿಯಾಗಿದ್ದು, ಹನುಮ ಜಯಂತಿ ಹಿನ್ನಲೆಯಲ್ಲಿ ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ನಿತ್ಯ ಆಟವಾಡಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.
ನಿತ್ಯ ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆಯುತ್ತಿದೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.
- Advertisement -