Friday, June 27, 2025
spot_imgspot_img
spot_imgspot_img

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಮೃತ್ಯು..!

- Advertisement -
- Advertisement -

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ನಾರಾಯಣಪೇಟೆಯ ಜಕ್ಲೇರ್ ಎಂಬಲ್ಲಿ ನಡೆದಿದೆ.

ಮೃತಪಟ್ಟವರು ಜಿಲ್ಲೆಯ ಸೈದಾಪುರದ ಗ್ರಾಮದ ಮೌಲಾಲಿ, ಖಲೀಲ್ ಹಾಗೂ ಬಸಮ್ಮ ಮತ್ತೊಂದು ಕಾರ್‌ನಲ್ಲಿದ್ದ ಮಹಾರಾಷ್ಟ್ರ ಮೂಲದ ಪ್ರಬೀತಾ ಹಾಗೂ ಅಸ್ಮಿತಾ ಎಂದು ಗುರುತಿಸಲಾಗಿದೆ.

ಕರ್ನಾಟಕದ ಕಾರವಾರದಿಂದ ವಿಶಾಖಪಟ್ಟಣಕ್ಕೆ ವರ್ಗಾವಣೆಗೊಂಡಿದ್ದ ಮಹಾರಾಷ್ಟ್ರ ಮೂಲದ ಭಾರತೀಯ ನೌಕಾಪಡೆಯ ಅಧಿಕಾರಿ ದೀಪಕ್ ಪ್ರಯಾಣಿಸುತ್ತಿದ್ದರು. ಹೆಂಡತಿ, ಮಗಳೊಂದಿಗೆ ವಿಶಾಖಪಟ್ಟಣಂಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಘಟನೆಯಲ್ಲಿ ದೀಪಕ್ ರಾವ್‍ಗೆ ಗಂಭೀರ ಗಾಯವಾಗಿದ್ದು, ಮಕ್ತಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!