Thursday, June 18, 2026
spot_imgspot_img
spot_imgspot_img

ಭೀಕರ ರಸ್ತೆ ಅಪಘಾತ – ಇಬ್ಬರ ದುರ್ಮರಣ

- Advertisement -
- Advertisement -

ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿಯ ಬೈಲಹೊಂಗಲದ ಇಂಚಲ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬೈಲಹೊಂಗಲ ನಗರದ ನಿವಾಸಿ ಮಂಗಲ ಭರಮನಾಯ್ಕರ್ (50), ಚಾಲಕ ಶ್ರೀಶೈಲ ನಾಗನಗೌಡರ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ರಾಯನಾಯ್ಕ ಭರಮನಾಯ್ಕರ್ (87), ಗಂಗವ್ವ ಭರಮನಾಯ್ಕರ್ (80), ಮಂಜುಳ ನಾಗನಗೌಡರ್ (30), ಮತ್ತೊಂದು ಕಾರಿನ ಇಂಚಲ ಗ್ರಾಮದ ಚಾಲಕ ಸುಬಾನಿ ವಕ್ಕುಂದ (28) ಎಂದು ಗುರುತಿಸಲಾಗಿದೆ.

ಗೋಕಾಕ್‍ನ ಕೊಣ್ಣೂರು ಪಟ್ಟಣದಿಂದ ಮನೆ ಗೃಹಪ್ರವೇಶಕ್ಕೆ ಬಟ್ಟೆ ಖರೀದಿಸಿ ಮರಳುವಾಗ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

- Advertisement -

Related news

error: Content is protected !!