- Advertisement -
- Advertisement -




ಕಾಫಿತೋಟದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಕಾಡಾನೆ ದಾಳಿಗೆ ಓರ್ವ ಬಲಿಯಾದ ಘಟನೆ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ವಸಂತ್ (45) ಎಂದು ಗುರುತಿಸಲಾಗಿದೆ.
ಕಾಫಿತೋಟದ ಕೆಲಸ ಮುಗಿಸಿ ಬರುವಾಗ ಒಂಟಿ ಸಲಗದ ದಾಳಿಯಿಂದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ಮೃತದೇಹ ಸ್ಥಳದಲ್ಲೇ ಇಟ್ಟು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸೋ ಮೂಲಕ ಆಕ್ರೋಶ ಹೊರಹಾಕ್ತಿದ್ದಾರೆ.
- Advertisement -