- Advertisement -
- Advertisement -



ವಿಟ್ಲ ವ್ಯಾಪ್ತಿಯ ಕೊಳ್ನಾಡು ಗ್ರಾಮದ ದೇವಸ್ಯ ಎಂಬಲ್ಲಿ ಯಜ್ಞನಾಥ ಶೆಟ್ಟಿ ಮಾಲಿಕತ್ವದ ಕೋಳಿ ಫಾರಂ ಕಟ್ಟಡ ಇಂದು ಸಂಜೆ ದಿಢೀರನೆ ಕುಸಿದು ಬಿದ್ದಿದೆ. ಶಬ್ದ ಕೇಳಿಸಿಕೊಂಡ ಮಾಲಿಕರು ಮತ್ತು ಸ್ಥಳೀಯರು ಸ್ಥಳಕ್ಕೆ ಬರುವಷ್ಟರಲ್ಲಿ ಐದು ಸಾವಿರಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿದೆ.

ಫಾರಂ ಕಟ್ಟಡ ದಿಢೀರನೆ ಕುಸಿದು ಬಿದ್ದ ಘಟನೆಯಿಂದ ಮಾಲಿಕರು ಆಘಾತಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ತಾ.ಪಂ.ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಕೊಳ್ನಾಡು ಗ್ರಾಮ ಪಂ.ಉಪಾಧ್ಯಕ್ಷೆ ಅಸ್ಮಾ ಹಸೈನಾರ್, ಮಾಜಿ ಸದಸ್ಯ ಯೂಸುಫ್ ತಾಳಿತ್ತನೂಜಿ, ಸಾಮಾಜಿಕ ಕಾರ್ಯಕರ್ತ ಹಸೈನಾರ್ ಮತ್ತಿತರರು ಆಗಮಿಸಿದ್ದಾರೆ. ದುರ್ಘಟನೆಯಿಂದಾಗಿ ಸುಮಾರು ಆರು ಲಕ್ಷಕ್ಕೂ ಅಧಿಕ ನಷ್ಟ ಅಂದಾಜಿಸಲಾಗಿದೆ.

- Advertisement -