Saturday, June 28, 2025
spot_imgspot_img
spot_imgspot_img

ಕಡಬ : ಸುಬ್ರಹ್ಮಣ್ಯ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

- Advertisement -
- Advertisement -

ಕಡಬ : ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವು ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧನರಾಗಿದ್ದಾರೆ.

ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ತೃಪ್ತಿಯನ್ನು ನಿನ್ನೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಆಕೆಯನ್ನು ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ನಿನ್ನೆ ರಾತ್ರಿಯೇ ಕೊನೆಯುಸಿರೆಳೆದಳು.
ಪಾರ್ಥಿವ ಶರೀರವನ್ನು ಎಡಮಂಗಲದ ಮನೆಗೆ ತಂದು ಇಂದು ಜ 12 ರಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮೃತರು ತಂದೆ ರಾಮಚಂದ್ರ ತಾಯಿ ಆಶಾ ಮತ್ತು ಸಹೋದರಿಯನ್ನು ಅಗಲಿದ್ದಾರೆ

- Advertisement -

Related news

error: Content is protected !!