- Advertisement -
- Advertisement -
ಕೇರಳ: ದೂರದರ್ಶನ ಟಿವಿ ಕಾರ್ಯಕ್ರಮದ ನೇರ ಪ್ರಸಾರದ ವೇಳೆ ಕೃಷಿ ತಜ್ಞರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಡಾ. ಅನಿ ಎಸ್ ದಾಸ್ (59) ಎಂದು ಗುರುತಿಸಲಾಗಿದೆ.
ಇವರು ಕೇರಳ ಕೃಷಿ ವಿಶ್ವವಿದ್ಯಾಲಯದ ಪ್ಲಾನಿಂಗ್ ಡೈರೆಕ್ಟರ್ ಆಗಿದ್ದರು. ಇವರು ದೂರದರ್ಶನ ಚಾನಲ್ನ ಕಾರ್ಯಕ್ರಮದ ನೇರಪ್ರಸಾರದಲ್ಲಿ ಭಾಗಿಯಾಗಿದ್ದರು. ಶೋನಲ್ಲಿ ಮಾತನಾಡುತ್ತಿದ್ದ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೇರಳದ ದೂರದರ್ಶನ ಚಾನಲ್ನಲ್ಲಿ ಕೃಷಿ ದರ್ಶನ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು ಎಂದು ವರದಿಯಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ ಎಂದು ತಿಳಿಸಿದ್ದಾರೆ.
- Advertisement -