Sunday, June 29, 2025
spot_imgspot_img
spot_imgspot_img

ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಓರ್ವ ಸಾವು..!

- Advertisement -
- Advertisement -

ಮಾರುತಿ ದೇವಾಲಯಕ್ಕೆ ತೆರಳುವಾಗ ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ.

ಮೃತಪಟ್ಟವರನ್ನು ಚಿತ್ರದುರ್ಗ ಮುನ್ಸಿಪಲ್ ಕಾಲೋನಿಯ 5ನೇ ಕ್ರಾಸ್ ನಿವಾಸಿ ವಿಶಾಲ್ (28) ಎಂದು ಗುರುತಿಸಲಾಗಿದೆ.

ಇವರು ಹೊಳಲ್ಕೆರೆಯ ಕೃಷಿ ಇಲಾಖೆಯಲ್ಲಿ ಟೆಕ್ನಿಕಲ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ನಾಳೆಯೇ ಇವರ ಎಂಗೇಜ್ಮೆಂಟ್ ಇತ್ತು. ಶನಿವಾರ ನಿಮಿತ್ತ ಹೊಳಲ್ಕೆರೆ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಚಿತ್ರದುರ್ಗದ ತಿರುಮಲ ಡಾಬಾದ ಬಳಿ ಬರುತ್ತಿದ್ದಂತೆ ಕಾರು ಮತ್ತು ಲಾರಿ ಮಧ್ಯೆ ಭೀಕರವಾದ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ವಿಶಾಲ್ ಮೃತಪಟ್ಟಿದ್ದಾನೆ.

ಅಪಘಾತದಿಂದ ಲಾರಿ ನೆಲಕ್ಕೆ ಉರುಳಿ ಬಿದ್ದಿದ್ದರೆ, ಕಾರು ಜಖಂ ಆಗಿದೆ. ವಿಶಾಲ್​ಗೆ ಶಿವಮೊಗ್ಗದ ಸಾಗರ ಮೂಲದ ಯುವತಿಯೊಂದಿಗೆ ನಾಳೆ ಎಂಗೇಜ್ಮೆಂಟ್ ನಡೆಯಬೇಕಿತ್ತು. ಖುಷಿ ಸಂಗತಿಯಲ್ಲಿ ಇರುವಾಗಲೇ ಯಮರಾಯ ಬಂದು ಜೀವ ತೆಗೆದಿದ್ದಾನೆ. ಇದು ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!