- Advertisement -
- Advertisement -



ವಿಟ್ಲ: ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಕಳವುಗೈದ ಘಟನೆ ಕರೋಪಾಡಿ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ.
ಕರೋಪಾಡಿ ಗ್ರಾಮದ ಪಾದೆಕಲ್ಲು ನಿವಾಸಿ ವಿನೋದ್ ಎಂಬವರು ಮನೆಯ ಅಂಗಳದಲ್ಲಿ ಅಡಿಕೆಯನ್ನು ಒಣಗಲು ಹಾಕಿದ್ದರು. ಬೆಳಗ್ಗಿನ ಜಾವ 3 ಗಂಟೆಗೆ ತೋಟಕ್ಕೆ ಹೋಗಿ ನೀರಿನ ಪಂಪ್ ಚಲಾಯಿಸಿ ಬಂದು ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಪರಿಶೀಲಿಸಿ ನಂತರ ಮನೆಯಲ್ಲಿ ಮಲಗಿದ್ದು ಬೆಳಿಗ್ಗೆ ಎದ್ದು ನೋಡಿದಾಗ ಅಂಗಳದಲ್ಲಿದ್ದ ಅಡಿಕೆ ಕಳವುಗೈದಿರುವ ಘಟನೆ ನಡೆದಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -