Sunday, June 29, 2025
spot_imgspot_img
spot_imgspot_img

ಉಳ್ಳಾಲ: ಪಾದಚಾರಿಗೆ ಬೈಕ್ ಡಿಕ್ಕಿ; ವ್ಯಕ್ತಿ ಮೃತ್ಯು..!

- Advertisement -
- Advertisement -

ಉಳ್ಳಾಲ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಅಂಬಿಕಾ ರೋಡ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಾಡೂರು ನಿವಾಸಿ ಜನಾರ್ಧನ ಆಚಾರ್ಯ (45) ಎಂದು ಗುರುತಿಸಲಾಗಿದೆ.

ಮೂಲತಃ ಅಂಬ್ಲಮೊಗರುವಿನ ನಿವಾಸಿ ಜನಾರ್ಧನ್ ಅವರು ಈ ಹಿಂದೆ ತೊಕ್ಕೊಟ್ಟು ಕರಾವಳಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ. ಮಾಡೂರಿನಲ್ಲಿ ಪತ್ನಿ, ಮಕ್ಕಳೊಂದಿಗೆ ವಾಸವಿದ್ದ ಜನಾರ್ಧನ್ ಶನಿವಾರ ರಾತ್ರಿ ಅಂಬಿಕಾರೋಡಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್‌ ಸವಾರ ಉಳ್ಳಾಲ ಒಂಬತ್ತು ಕೆರೆ ನಿವಾಸಿ ಕಿರಣ್ ಎಂಬವರು ತಲಪಾಡಿ ಕಡೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕಿರಣ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!