Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಸುಡುಮದ್ದು ಘಟಕದಲ್ಲಿ ಸ್ಪೋಟ – ಮಾಲೀಕ ವಶಕ್ಕೆ…!

- Advertisement -
- Advertisement -

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿ ಸುಡುಮದ್ದು ತಯಾರಿ ಘಟಕದಲ್ಲಿ ಸ್ಪೋಟ ಸಂಭವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್‌ ಮೇಲೆ ಎಫ್ಐಆರ್ ದಾಖಲಾಗಿದೆ‌. ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆಗೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಭಾನುವರ 5.15ರ ಸುಮಾರಿಗೆ ಈ ದುರಂತ ನಡೆದಿದ್ದು, ಕೇರಳದವರಾದ ಸ್ವಾಮಿ (55), ವರ್ಗೀಸ್‌ (68), ಹಾಸದ ಅರಸೀಕೆರೆ ಮೂಲದ ಚೇತನ್‌ (25) ಎಂಬ ಮೂವರು ಮೃತರಾಗಿದ್ದು, ಘಟನೆ ನಡೆದ ಬಳಿಕ ಉಳಿದ ಕಾರ್ಮಿಕರು, ಮಾಲೀಕ ಪರಾರಿಯಾಗಿದ್ದರು.

ಬಶೀರ್‌ ಎಂಬಾತನು ತನ್ನ ತೋಟದ ಶೆಡ್‌ನಲ್ಲಿ, ಕೇರಳ ಮೂಲದ 3 ಜನ ಹಾಗೂ ಹಾಸನ ಮೂಲದ 6 ಜನರನ್ನು ಸೇರಿಸಿಕೊಂಡು, ಸ್ಪೋಟಕ ವಸ್ತುಗಳ ನುರಿತ ಕಾಮಗಾರಿಗಳನ್ನು ತಯಾರಿಸುವ ವ್ಯಕ್ತಿಗಳನ್ನು ನಿಯೋಜಿಸದೆ ಹಾಗೂ ಸ್ಪೋಟಕ ವಸ್ತುಗಳು ಸಿಡಿದರೆ ಜೀವಹಾನಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗುತ್ತದೆ ಎಂದು ತಿಳಿದಿದ್ದರೂ, ಯಾವುದೇ ಮುಂಜಾಗ್ರತೆ ಕ್ರಮ ವಹಿಸದೆ ನಿರ್ಲಕ್ಷತನದಿಂದ ಕಾಮಗಾರಿ ನಡೆಸುವಾಗ, ಸ್ಪೋಟಕ ವಸ್ತುವಿನಲ್ಲಿ ಬೆಂಕಿ ಕಾಣಿಸಿ ಸ್ಪೋಟಗೊಂಡ ಪರಿಣಾಮ, ಕೆಲಸ ಮಾಡುತ್ತಿದ್ದ ಮೂವರು ಮೃತಪಟ್ಟಿದ್ದು, ಇದರ ವಿರುದ್ದ ಸಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!