- Advertisement -
- Advertisement -
ಮಂಗಳೂರು: ಮಂಗಳೂರಿನ ಮೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ತುಮಕೂರು ಮೂಲದ ಮಂಗಳೂರಿನಲ್ಲಿರುವ , ಪ್ರಸ್ತುತ ಮೆಸ್ಕಾಂ ಕಚೇರಿಯಲ್ಲಿರುವ ಇಇ ಶಾಂತಕುಮಾರ್ ಮನೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡಕ್ಕೆ 33 ಲಕ್ಷ ರೂ. ನಗದು, ಬಾಂಡ್ ದಾಖಲೆ, ಪತ್ನಿಯ ಖಾತೆಗೆ ದೊಡ್ಡ ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ.
ದೇರೆಬೈಲ್ ಕೊಂಚಾಡಿಯಲ್ಲಿರುವ ಶಾಂತಕುಮಾರ್ ಮನೆ ಶಿವಪ್ರಸಾದ್ ಗೋಲ್ಡ್ ಅಪಾರ್ಟ್ಮೆಂಟ್ ನಲ್ಲಿರುವ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದರು.
ಕಳೆದ ಐದಾರು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಂತಕುಮಾರ್ ಆದಾಯ ಮೀರಿ ಅಸ್ತಿಗಳಿಕೆ ಆರೋಪದಡಿ ದಾಳಿ ನಡೆಸಲಾಗಿದೆ.
- Advertisement -