Saturday, June 28, 2025
spot_imgspot_img
spot_imgspot_img

ಕಾಪು : ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ

- Advertisement -
- Advertisement -

ಕಾಪು : ಜ.30ರಿಂದ ಮೀನುಗಾರರೊಬ್ಬರು ನಾಪತ್ತೆಯಾಗಿರುವ ಘಟನೆ ಕಟಪಾಡಿ ಮಟ್ಟು ಗ್ರಾಮದ ದುಗ್ಗುಪಾಡಿ ಎಂಬಲ್ಲಿ ನಡೆದಿದೆ.

ದುಗ್ಗುಪಾಡಿ ನಿವಾಸಿ ಶ್ರೀನಿವಾಸ ಸಾಲ್ಯಾನ್(45) ನಾಪತ್ತೆಯಾದ ಮೀನುಗಾರ ಎಂದು ತಿಳಿದು ಬಂದಿದೆ.
ದೋಣಿಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಮನೆಯ ಹತ್ತಿರದವರಲ್ಲಿ ಕಟಪಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!