Sunday, June 29, 2025
spot_imgspot_img
spot_imgspot_img

ಪ್ರೀತಿಗೆ ಪೋಷಕರ ವಿರೋಧ; ಮನನೊಂದು ಯುವತಿ ಆತ್ಮಹತ್ಯೆ..!

- Advertisement -
- Advertisement -

ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವಳು ಸಂಗೀತಾ (17) ಎಂದು ಗುರುತಿಸಲಾಗಿದೆ.

ಸಂಗೀತಾಗೆ ಕಾರ್ ಡ್ರೈವರ್ ಕೃಷ್ಣ ಎಂಬಾತನ ಜೊತೆಗೆ ಪ್ರೇಮಾಂಕುರವಾಗಿತ್ತು. ಈ ಹಿಂದೆ 2 ಬಾರಿ ಕೃಷ್ಣನ ಜೊತೆಗೆ ಈಕೆ ಮನೆಬಿಟ್ಟು ಹೋಗಿದ್ದಳು. ಆಗ ಹೆತ್ತವರು ಬುದ್ದಿವಾದ ಹೇಳಿ ಮನೆಗೆ ಕರೆತಂದಿದ್ದರು. ಕೊನೆಗೆ ಮನನೊಂದು ಮನೆಯಲ್ಲಿಯೇ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿದ್ದ ಸೀರೆಯಿಂದ ನೇಣುಬಿಗಿದುಕೊಂಡು ಸಂಗೀತಾ ಸಾವಿಗೆ ಶರಣಾಗಿದ್ದಾಳೆ. ಈಕೆಯ ಮೃತದೇಹವನ್ನು ಮಾನ್ವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪ್ರಾಪ್ತೆಯ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಆರೋಪಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!