Sunday, June 29, 2025
spot_imgspot_img
spot_imgspot_img

ಪುತ್ತೂರು: ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರ ವಾರ್ಷಿಕ ಕ್ರೀಡಾಕೂಟ

- Advertisement -
- Advertisement -

ಪುತ್ತೂರು: ದಿನಾಂಕ 15-02-2024 ರಂದು ಪುತ್ತೂರು ಬೋಳುವಾರು ಹಿರಣ್ಯ ಸಂಕೀರ್ಣದಲ್ಲಿ ಇರುವ ಜ್ಞಾನಜೋತಿ ತಾಂತ್ರಿಕ ಶಿಕ್ಷಣ ಕೇಂದ್ರದ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಕಾರ್ಜಾಲ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ಧೂಮಾವತಿ ದೇವಸ್ಥಾನದ ಅಧ್ಯಕ್ಷರಾದ ಅಜಿತ್ ಕುಮಾರ್ ಜೈನ್ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪುತ್ತೂರು ಗ್ರಹ ನಿರ್ಮಾಣ ಸಹಕಾರ ಮಂಡಳಿಯ ಕಾರ್ಯನಿರ್ವಹಣಾಧಿಕಾರಿಗಳಾದ ಪುರುಷೋತ್ತಮ್ ಶೆಟ್ಟಿ ಕೊಂಬಿಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ದೈಹಿಕ ಶಿಕ್ಷಕರಾದ ಸಂತೋಷ್, ಪ್ರವೀಣ್, ನವೀನ್, ನಿತೇಶ್ ರವರು ವಿವಿಧ ಕ್ರೀಡೆಗಳಾದ ವಾಲಿಬಾಲ್ ಕ್ರಿಕೆಟ್ ಕಬಡ್ಡಿ ಹಗ್ಗ ಜಗ್ಗಾಟಗಳನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕಬಕ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಪ್ರಶಾಂತ್ ಮುರ ರವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು ಕಾರ್ಯಕ್ರಮದಲ್ಲಿ ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದ ಆಡಳಿತ ನಿರ್ದೇಶಕರಾದ ಮಹೇಶ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಹರ್ಷಿತ್ ಹನುಮಜೆ, ಶಿಕ್ಷಕಿಯರಾದ ಸರಿತಾ,ಗುಲಾಬಿ ಉಪಸ್ಥಿತರಿದ್ದರು

- Advertisement -

Related news

error: Content is protected !!