- Advertisement -
- Advertisement -




ಸುಳ್ಯ: ಬಸ್ – ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸುಳ್ಯ ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಪದ್ಮನಾಭ ಶಿಕ್ಷಕ ಎಂದು ಗುರುತಿಸಲಾಗಿದೆ.
ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿತ್ತು, ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
- Advertisement -