Friday, July 4, 2025
spot_imgspot_img
spot_imgspot_img

ಕಡಬ: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಚಾಲಕ ಮೃತ್ಯು..!

- Advertisement -
- Advertisement -

ಕಡಬ: ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ನಡೆದಿದೆ.

ಮೃತಪಟ್ಟ ಆಟೋ ಚಾಲಕ ವಿವೇಕಾನಂದ ದೇವರಗದ್ದೆ ಎಂದು ಗುರುತಿಸಲಾಗಿದೆ.

ಇಂಜಾಡಿ ಬಳಿ ಹೋಗುತ್ತಿರುವಾಗ ವಿವೇಕಾನಂದ ಅವರಿಗೆ ಬಿ.ಪಿ. ಲೋ ಆದ ಪರಿಣಾಮ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆ ಸಾಗಿಸುವ ಪ್ರಯತ್ನ ಮಾಡಲಾಯಿತಾದ್ರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!