Sunday, June 29, 2025
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಕಾರು; ಇಬ್ಬರು ಸಾವು..!

- Advertisement -
- Advertisement -

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ನೀರಿಲ್ಲದೆ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಅನ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತಪಟ್ಟವರನ್ನು ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದ ನಂದೀಶ್ (18) ಹಾಗೂ ಯೋಗಾನಂದ (20) ಎಂದು ಗುರುತಿಸಲಾಗಿದೆ.

ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ತಡೆಗೋಡೆ ಇರದ ಹಿನ್ನಲೆ 25 ಅಡಿ ಆಳದ ನಾಲೆಗೆ ಕಾರು ಬಿದ್ದಿದೆ. ಕಾರು ಮೇಲಿಂದ ಬಿದ್ದ ಹಿನ್ನೆಲೆಯಲ್ಲಿ ಸಂಪೂರ್ಣ ಜಖಂ ಆಗಿದೆ.

ಇಂದು ಬೆಳಗ್ಗೆ ಇವರು ಕಾರಿನಲ್ಲಿ ಸೇತುವೆ ಮೇಲೆ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ದೊಡ್ಡ ಕಾಲುವೆಗೆ ಈ ಹಿಂದೆಯೂ ಅನೇಕ ಮಂದಿ ಆಕಸ್ಮಿಕವಾಗಿ ಬಿದ್ದು ಸಾವು ನೋವು ಸಂಭವಿಸಿವೆ. ಕಾಲುವೆಗೆ ತಡೆಗೋಡೆ ನಿರ್ಮಿಸಲು ಅನೇಕ ವರ್ಷಗಳಿಂದ ಇಲ್ಲಿನ ಶಾಸಕರಿಗೆ ಗ್ರಾಮಸ್ಥರು ಮನವಿ ನೀಡಿದ್ದರೂ ಇದುವರೆಗೂ ಸೂಕ್ತ ಸ್ಪಂದನ ಸಿಕ್ಕಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!