Friday, June 27, 2025
spot_imgspot_img
spot_imgspot_img

ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವು..!

- Advertisement -
- Advertisement -

ಈಜಲು ಬಂದ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಆಗರ ಕೆರೆಯಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಗಳನ್ನು ಪೃಥ್ವಿರಾಜ್, ನವೀನ್ ಎಂದದು ಗುರುತಿಸಲಾಗಿದೆ.

ಒಟ್ಟು 11 ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ಹೋಗಿದ್ದರು. ಇವರೆಲ್ಲ ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಈಜಲು ನೀರಿಗೆ ಇಳಿದಿದ್ದ ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ.

ಇಬ್ಬರು ಹುಡುಗರು ದೊಡ್ಡಬೆಲೆ ಮೂಲದವರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ. ಮೃತ ದೇಹಗಳನ್ನು ಕೆರೆಯಿಂದ ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

- Advertisement -

Related news

error: Content is protected !!