Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಸ್ಕೂಟಿ-ಪಿಕಪ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಪಿಕಪ್‌ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಇಂದು ಮೃತಪಟ್ಟ ಘಟನೆ ಬೆಳ್ತಂಗಡಿ ಹಳೇಕೋಟೆ ಬಳಿ ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತ್ತಿದ್ದ ದ್ವಿಚಕ್ರ ವಾಹನವು ಎದುರಿನಿಂದ ಬರುತ್ತಿದ್ದ ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದು, ಸವಾರ ಪುರುಷೋತ್ತಮ (19) ಎಂಬಾತ ಸ್ಥಳದಲ್ಲೇ ಮೃತ ಹೊಂದಿದ್ದರು.

ಅಪಘಾತದಲ್ಲಿ ಸಹಸವಾರ ತೌಫೀಕ್‌ (17) ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ತೌಫೀಕ್‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!