- Advertisement -
- Advertisement -



ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೇ , ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಮರಿಗೌಡ ರಾತ್ರಿ ಕರ್ತವ್ಯದಲ್ಲಿರುವಾಗ ಉಡುಪಿ ಸಿಟಿ ಬಸ್ ನಿಲ್ದಾಣದ ಕಡೆಯಿಂದ ಕಲ್ಸಂಕ ಕಡೆಗೆ ಹೋಗುವ ಓಮ್ನಿ ಕಾರೊಂದರಲ್ಲಿ ಸುಮಾರು 4 ಜನರು ಸಿಟಿ ಬಸ್ ನಿಲ್ದಾಣದ ಬಳಿಯ ಮೆಡಿಕಲ್ ಶಾಪ್ವೊಂದರ ಎದುರು ರಸ್ತೆ ಬದಿಯಲ್ಲಿ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಬಿಯರ್ ಬಾಟಲಿ ಹಾಗೂ ರಾಡ್ಗಳನ್ನು ಎಸೆದು ಹೋಗಿದ್ದಾರೆ.
ಅಲ್ಲದೆ, ಇದೇ ವಠಾರದಲ್ಲಿ 2-3 ಬಾರೀ ಸುತ್ತಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆ ವಾಹನ ಮಾಲೀಕನಲ್ಲಿ ವಿಚಾರಿಸಲಾಗಿತ್ತು. ಬಳಿಕ ಆರೋಪಿ ಆದಮ್ ಮತ್ತು ಅದೇ ಫೋನ್ನಲ್ಲಿ ಮತ್ತೋರ್ವ ಆರೋಪಿ ಕೂಡ ಮರಿಗೌಡ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಕುರಿತು ಮರಿಗೌಡ ಅವರು ಉಡುಪಿನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
- Advertisement -