Tuesday, April 30, 2024
spot_imgspot_img
spot_imgspot_img

ವಿಮಾನ ನಿಲ್ದಾಣದ ಗೋದಾಮಿನಿಂದ 2.5 ಕೆಜಿ ಚಿನ್ನ ನಾಪತ್ತೆ- ಐವರು ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಕೇಸ್ ದಾಖಲು

- Advertisement -G L Acharya panikkar
- Advertisement -

ಬೆಂಗಳೂರು (ಅ. 18): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದ ಗೋದಾಮಿನಿಂದ 2.5 ಕೆಜಿ ಚಿನ್ನವನ್ನು ಕದಿಯಲಾಗಿದೆ. ಚಿನ್ನ ಕಳ್ಳಸಾಗಣೆಯ ವೇಳೆ ಸೀಜ್ ಮಾಡಲಾಗಿದ್ದ ಚಿನ್ನವನ್ನು ಬೆಂಗಳೂರು ಏರ್​ಪೋರ್ಟ್ ಗೋದಾಮಿನಲ್ಲಿ ಇರಿಸಲಾಗಿತ್ತು. ಆ ಚಿನ್ನವನ್ನು ಕಳವು ಮಾಡಿರುವ ಆರೋಪದಲ್ಲಿ 5 ಜನ ಕಸ್ಟಮ್ಸ್​ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕಸ್ಟಮ್ಸ್ ಜಂಟಿ ಆಯುಕ್ತ ಎಂ.ಜೆ. ಚೇತನ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಜೂನ್ 2012ರಿಂದ ಡಿಸೆಂಬರ್ 2014ರವರೆಗೆ ಬೆಂಗಳೂರಿನ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಜಪ್ತಿ ಮಾಡಲಾಗಿದ್ದ ಚಿನ್ನವನ್ನು ವಿಮಾನ ನಿಲ್ದಾಣದ ಎಂಹೆಚ್​ಬಿ ಗೋಡಾನ್​ನಲ್ಲಿ ಶೇಖರಣೆ ಮಾಡಲಾಗಿತ್ತು. ಚಿನ್ನ ಕಳವು ಬಗ್ಗೆ ಆಂತರಿಕ ತನಿಖೆ ಕೈಗೊಂಡಿದ್ದ ಕಸ್ಟಮ್ಸ್​ ಇಲಾಖೆಯ ವಿಜಿಲೇನ್ಸ್ ಅಧಿಕಾರಿಗಳು ತನಿಖೆ ವೇಳೆ 13 ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ 2 ಕೆಜಿ 594 ಗ್ರಾಂ. ಚಿನ್ನ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

- Advertisement -

Related news

error: Content is protected !!