Monday, June 30, 2025
spot_imgspot_img
spot_imgspot_img

ಹಾವು ಕಡಿದು ವ್ಯಕ್ತಿ ಸಾವು..!

- Advertisement -
- Advertisement -

ಹಾವು ಕಡಿದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಹೊನ್ನೇಹಳ್ಳಿ ಗ್ರಾಮದ (33) ಎಂದು ಗುರುತಿಸಲಾಗಿದೆ.

ಅಡಕೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದಾಗ ನಿಂಗರಾಜ್‌ಗೆ ಹಾವು ಕಡಿದಿದೆ. ಕೂಡಲೇ ಉರಿ ಉರಿ ಎಂದು ಕಿರುಚಾಡಿದ್ದಾರೆ. ಕೂಡಲೇ ಅಕ್ಕ -ಪಕ್ಕದ ಹೊಲದವರು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮನೆಗೆ ಕರೆತಂದಿದ್ದಾರೆ. ಇತ್ತ ನಿಂಗರಾಜ್ ತೀವ್ರ ಒದ್ದಾಡುತ್ತಿದ್ದ ಕಾರಣಕ್ಕೆ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ.

ಆದರೆ ಆಂಬ್ಯುಲೆನ್ಸ್‌ ಬೇರೆ ಕಡೆ ಇದೆ ಬರುವುದು ತಡವಾಗಲಿದೆ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಇತ್ತ ಸಮಯಕ್ಕೆ ಸರಿಯಾಗಿ ಬೇರೆ ಖಾಸಗಿ ವಾಹನಗಳು ಇಲ್ಲದೇ, ಸೂಕ್ತ ಚಿಕಿತ್ಸೆ ಸಿಗದೇ ಮನೆಯಲ್ಲಿಯೇ ನಿಂಗರಾಜ್ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!