Monday, June 30, 2025
spot_imgspot_img
spot_imgspot_img

ಖಾಸಗಿ ಬಸ್​​​ ಅಪಘಾತ; ಮೂವರು ಸಾವು, 31 ಜನರಿಗೆ ಗಾಯ

- Advertisement -
- Advertisement -

ಖಾಸಗಿ ಬಸ್ ಅಪಘಾತಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಇಂದು(ಏ.07) ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ . ಅಪಘಾತದಲ್ಲಿ ಮೂರು ಜನ ಸಾವನ್ನಪ್ಪಿದ್ದು, 31 ಜನರಿಗೆ ಗಾಯವಾಗಿದೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ಹೊಟಿದ್ದ ಸೀಬರ್ಡ್ ಖಾಸಗಿ ಬಸ್ ಚಾಲಕನ ಅತೀ ವೇಗದ ಚಾಲಾನೆಯಿಂದ ನಿಯಂತ್ರಣ ತಪ್ಪಿ ಬಂಡೆಗೆ ಬಡಿದು ಅಪಘಾತವಾಗಿದೆ ಎಂದು ತಿಳಿದುಬಂದಿದೆ. ಮೃತ ದೇಹಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಹೊಳಲ್ಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

- Advertisement -

Related news

error: Content is protected !!