Saturday, June 28, 2025
spot_imgspot_img
spot_imgspot_img

ಮಂಗಳೂರು: ನೀರು ಸೇದುವ ವೇಳೆ ಬಾವಿಗೆ ಬಿದ್ದ ಮಹಿಳೆ; ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ..!

- Advertisement -
- Advertisement -

ಮಂಗಳೂರು: ಬಾವಿಯಿಂದ ನೀರು ಸೇದುವ ವೇಳೆ ಆಯ ತಪ್ಪಿದ ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಗುರುವಾರ ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ (58) ಎಂದು ಗುರುತಿಸಲಾಗಿದೆ.

ಸಂಜೆ 5 ಗಂಟೆ ಸುಮಾರಿಗೆ ಟ್ರೆಸ್ಸಿ ಬಾವಿಯಿಂದ ನೀರು ಸೇದುತ್ತಿದ್ದಾಗ ತಲೆ ಸುತ್ತಿ ಬಾವಿಗೆ ಬಿದ್ದಿದ್ದಾರೆ. ಕೂಡಲೇ ಆಕೆಯ ಕುಟುಂಬಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ. ಬಾವಿಯಲ್ಲಿ ಎಂಟು ಅಡಿಗೂ ಹೆಚ್ಚು ನೀರು ಇತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ನೀಡಿದ ಮಾಹಿತಿಯಂತೆ ಬಾವಿಯಲ್ಲಿದ್ದ ಪಂಪ್‌ಗೆ ಅಳವಡಿಸಿದ್ದ ಹಗ್ಗವನ್ನು ಮಹಿಳೆ ಹಿಡಿದಿದ್ದಾರೆ.

ಕಾರ್ಯಾಚರಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜೀವ, ಮುಖ್ಯ ಅಗ್ನಿಶಾಮಕ ದಳದ ಅಧಿಕಾರಿ ಚಂದ್ರಹಾಸ ಸಾಲಿಯಾನ್, ಸಿಬ್ಬಂದಿಗಳಾದ ದಯಾಕರ, ಪುನೀತ್, ಶಿವರಾಜ್, ಪವನ್ ಕುಮಾರ್ ಭಾಗವಹಿಸಿದ್ದರು.

- Advertisement -

Related news

error: Content is protected !!