Sunday, June 29, 2025
spot_imgspot_img
spot_imgspot_img

ಕುಂದಾಪುರ: ನೀರಿನಲ್ಲಿ ಮುಳುಗಿ ಮಹಿಳೆ ಮೃತ್ಯು..!

- Advertisement -
- Advertisement -

ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಕೋಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮೃತಪಟ್ಟ ಮಹಿಳೆ ಕುಂದಾಪುರ ಕೋಣಿ ಗ್ರಾಮದ ವನಜ ಎಂದು ಗುರುತಿಸಲಾಗಿದೆ.

ವನಜ ಅವರು ಸಿಗಡಿ ಮೀನು ತೆಗೆಯುವ ಕೆಲಸವನ್ನು ಮಾಡಿಕೊಂಡಿದ್ದು, ಎಂದಿನಂತೆ ಅವರು ಸಿಗಡಿ ಮೀನು ತೆಗೆಯಲು ಕೋಣಿಯ ಮಲ್ಲನಬೆಟ್ಟು ಹೊಳೆಗೆ ಹೋಗಿದ್ದಾರೆ. ಈ ವೇಳೆ ಅವರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಬಳಿಕ ವನಜಾ ಅವರ ಪತಿ ವಾಸು ಹಾಗೂ ಸ್ಥಳೀಯರು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅದಾಗಲೇ ವೈದ್ಯರು ವನಜಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 09/2024 ಕಲಂ: 174 ಸಿಆರ್ ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!