ಬಂಟ್ವಾಳ ಅ.(19) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಕೊಳ್ನಾಡು ಮಹಾಶಕ್ತಿ ಕೇಂದ್ರದ ಸಾಲೆತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಕುಟುಂಬ ಮಿಲನ ಕಾರ್ಯಕ್ರಮ ನವಚೇತನ ಯುವಕ ಮಂಡಲದಲ್ಲಿ ನಡೆಯಿತು.


ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಆನೆಯಾಲ ಗುತ್ತು ಅಧ್ಯಕ್ಷತೆಯಲ್ಲಿ. ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕ ಕೊಳ್ನಾಡು ಮಹಾಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಕ್ಷೇತ್ರ ಉಪಾಧ್ಯಕ್ಷರಾದ ಜಯರಾಮ ನಾಯ್ಕ್ ಕುಂಟ್ರಕಳ, ಕ್ಷೇತ್ರ ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರ್, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಲೋಹಿತ್ ಅಗರಿ, ಸಾಲೆತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಾವತಿ, ಮಹಾಶಕ್ತಿ ಕೇಂದ್ರದ ವಿಧ್ಯೇಶ್ ಕಿಲ್ಲೆಂಬೇರೆ ಪಡ್ಪು ಮತ್ತಿತರರು ಉಪಸ್ಥಿತರಿದ್ದರು.

ಲೋಹಿತ್ ರವರು ಕಾರ್ಯಕ್ರಮಕ್ಕೆ ಆಗಮಿಸಿದವರನ್ನು ಸ್ವಾಗತಿಸಿದರು. ದೇವದಾಸ್ ಶೆಟ್ಟಿ ಪಾಲ್ತಾಜೆ ಧನ್ಯವಾದ ಅರ್ಪಿಸಿದರು. ಶಂಕರ್ ಶೆಟ್ಟಿಗಾರ್ ಕಾರ್ಯಕ್ರಮವನ್ನು ನಿರೂಪಿಸಿದರು.
