Sunday, June 29, 2025
spot_imgspot_img
spot_imgspot_img

ವೇದಿಕೆಯಲ್ಲಿ ಭಾಷಣದ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ..!

- Advertisement -
- Advertisement -

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿನಡೆದಿದೆ.

ಯವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪುಸಾದ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಗಡ್ಕರಿ ಅವರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.ಈ ಕಾರ್ಯಕ್ರಮದಲ್ಲಿ ವೈದ್ಯರು ಇದ್ದ ಕಾರಣ ಅವರನ್ನು ಪರೀಕ್ಷೆ ಮಾಡಿ ಆಸ್ಪತ್ರೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ.

ತಕ್ಷಣ ಅವರ ಗನ್ ಮ್ಯಾನ್ ಹಾಗೂ ಪಕ್ಷದ ನಾಯಕರು ಧಾವಿಸಿ ಅವರನ್ನು ಆಸ್ಪತ್ರೆ ಸಾಗಿಸಿದ್ದಾರೆ. “ಮಹಾರಾಷ್ಟ್ರದ ಪುಸಾದ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಬಿಸಿಲಿನ ಕಾರಣದಿಂದ ನಾನು ಅಸ್ವಸ್ಥನಾಗಿದ್ದೆ. ಆದರೆ ಈಗ ನಾನು ಸಂಪೂರ್ಣವಾಗಿ ಸರಿಯಾಗಿದ್ದೇನೆ ಮತ್ತು ಮುಂದಿನ ರ್‍ಯಾಲಿಯಲ್ಲಿ ಭಾಗವಹಿಸಲು ವರುದ್‌ಗೆ ಹೋಗುತ್ತಿದ್ದೇನೆ” ಎಂದುನಿತಿನ್ ಗಡ್ಕರಿ ಅವರು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

- Advertisement -

Related news

error: Content is protected !!