Sunday, June 29, 2025
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿ ಬಿದ್ದ ಬಸ್‌; ಐವರು ಸಾವು, 45 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ..!

- Advertisement -
- Advertisement -

ತಮಿಳುನಾಡಿನ ಯೆರ್ಕೇಡ್​​ನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ 13ನೇ ಹೆಪಾರಿಯನ್ ತಿರುವಿನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಜೋರಾಗಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲೇ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಕೂಡಲೇ ಅಲ್ಲಿದ್ದ ಇತರೆ ಪ್ರಯಾಣಿಕರು ವಾಹನ ನಿಲ್ಲಿಸಿ ಸಹಾಯಕ್ಕೆ ಮುಂದಾಗಿದ್ದಾರೆ. ಪೊಲೀಸರಿಗೆ, ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ.

ದುರ್ಘಟನೆಯಲ್ಲಿ ಓರ್ವ ಬಾಲಕ ಸೇರಿ ಒಟ್ಟು ಐವರು ಪ್ರಯಾಣಿಕರು ಸಾವನ್ನಪ್ಪಿದ್ದರು. ದುರ್ಘಟನೆಯಲ್ಲಿ 45 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇನ್ನೂ ಅಪಘಾತದ ಸ್ಥಳಕ್ಕೆ ಸ್ಥಳೀಯರೊಂದಿಗೆ ರಕ್ಷಣಾ ತಂಡಗಳು ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

- Advertisement -

Related news

error: Content is protected !!