Monday, June 30, 2025
spot_imgspot_img
spot_imgspot_img

ಕಾರವಾರ: ಬಸ್‌ ಪಲ್ಟಿ; ಇಬ್ಬರು ಮೃತ್ಯು, ಹಲವರಿಗೆ ಗಾಯ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಕಾರವಾರ: ಪ್ರವಾಸಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪ ಬಳಿ ಗೋಳಿಮಕ್ಕಿ ಎಂಬಲ್ಲಿ ನಡೆದಿದೆ.

ಮೃತರನ್ನು ಬಸ್‌ ಚಾಲಕ ತುಮಕೂರು ಮಧುಗಿರಿ ತಾಲೂಕ ಕೈಮಾರ ಗ್ರಾಮದ ನಿವಾಸಿ ಲೋಕೇಶ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಹಿರೆಬಿದನೂರು ಗ್ರಾಮದ ರುದ್ರೇಶ್ ಗಂಗಾಧರಾಯ್ ಎಂದು ಗುರುತಿಸಲಾಗಿದೆ.

ಇದು ತುಮಕೂರಿನ ಪ್ರವಾಸಿ ಬಸ್ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!