Saturday, June 28, 2025
spot_imgspot_img
spot_imgspot_img

ಪುತ್ತೂರು : ರಸ್ತೆ ದಾಟುತ್ತಿದ್ದಾಗ ರಿಕ್ಷಾ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೇ ನಿವೃತ್ತ ಶಿಕ್ಷಕ ಸಾವು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಪುತ್ತೂರು : ರಸ್ತೆ ದಾಟುತ್ತಿದ್ದ ಪಾದಚಾರಿಗೆ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಪಾದಚಾರಿ ನಿವೃತ್ತ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಸಂಪ್ಯದಲ್ಲಿ ನಡೆದಿದೆ.

ಮೃತರನ್ನು ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ) ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಸರಕಾರಿ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದುಕೊಂಡು ಬರುತ್ತಿದ್ದ ರಿಕ್ಷಾವೊಂದು ಸೂರ್ಯನಾರಾಯಣ ಕಾರಂತ ಅವರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಸೂರ್ಯನಾರಾಯಣ ಅವರು ರಸ್ತೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಅವರನ್ನು ಬೇರೊಂದು ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೂರ್ಯನಾರಾಯಣ ಕಾರಂತ ಸಾವನ್ನಪ್ಪಿದ್ದಾರೆ

- Advertisement -

Related news

error: Content is protected !!