



ಬೆಂಗಳೂರಿನ ಸಂಜಯ್ ನಗರದಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಕೆಎಎಸ್ ಅಧಿಕಾರಿಯ ಪತ್ನಿ ಹಾಗೂ ಹೈಕೋರ್ಟ್ ವಕೀಲರಾದ ಚೈತ್ರಾಗೌಡ ಎಂದು ಗುರುತಿಸಲಾಗಿದೆ.
ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಚೈತ್ರಾಗೌಡ ಅವರು ಇಂದು ಸಂಜಯ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿದೆ ಎನ್ನಲಾಗಿದೆ. ಮನೆಯಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ಹೀಗಾಗಿ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ವೃತ್ತಿಯಲ್ಲಿ ವಕೀಲೆಯಾಗಿದ್ದ ಚೈತ್ರಾ ಗೌಡ ಸಾಮಾಜಿಕ ಚಟುವಟಿಕೆಯಲ್ಲಿಯೂ ಸಾಕಷ್ಟು ತೊಡಗಿಸಿಕೊಂಡಿದ್ದರು. ಅಲ್ಲದೇ ದಂಪತಿಗೆ 5 ವರ್ಷದ ಮಗ ಕೂಡ ಇದ್ದು, ಇದೀಗ ಏಕಾಏಕಿ ನೇಣು ಬಿಗಿದ ಸ್ಥಿತಿಯಲ್ಲಿ ಚೈತ್ರಾ ಗೌಡ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆಯ ಕುರಿತು ಮೃತ ಚೈತ್ರಾ ಗೌಡ ಅವರ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.