- Advertisement -
- Advertisement -



ಕುಂದಾಪುರ: ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಕೂರಿನ ಗುಲ್ವಾಡಿ ಡ್ಯಾಮ್ ಸಮೀಪ ಇಂದುಸಂಜೆ ನಡೆದಿದೆ.
ಮೃತ ಪಟ್ಟ ವ್ಯಕ್ತಿಯನ್ನು ಬಳ್ಕೂರು ಬಸವ ಪೂಜಾರಿ (55) ಎಂದು ಗುರುತಿಸಲಾಗಿದೆ.
ಕಂಡ್ಲೂರು ನಿಂದ ಬಸ್ರೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಬಸ್ರೂರು ಕಡೆಯಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ನೇರ ಡಿಕ್ಕಿ ಹೊಡೆದಿದ್ದು. ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -