Tuesday, July 8, 2025
spot_imgspot_img
spot_imgspot_img

ಪುತ್ತೂರು: ಚಿಕಿತ್ಸೆಗೆ ಬಂದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಮೃತ್ಯು; ಕುಟುಂಬಸ್ಥರ ಆಕ್ರೋಶ -ದೂರು ದಾಖಲು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಪುತ್ತೂರು : ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯೋರ್ವರು ಚಿಕಿತ್ಸೆ ಸಂದರ್ಭ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಕ್ಕೂ ಮಿಕ್ಕಿ ಜನ ಸೇರಿದ ಘಟನೆ ಮೇ.15ರಂದು ನಡೆದಿದೆ

ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ ಕಕ್ಕೆಪದವು ಪಿಲಿಬೈಲು ನಿವಾಸಿ ಕೃಷ್ಣಪ್ಪ ಗೌಡ ಎನ್ನುವವರು ಜ್ವರ ಹಾಗೂ ನಿಶಕ್ತಿಯಿಂದ ಚಿಕಿತ್ಸೆಗೆ ಬಂದಿದ್ದರು.

ವೈದ್ಯರ ಸೂಚನೆಯಂತೆ ಸ್ಕ್ಯಾನಿಂಗ್ ಮಾಡಿಸಿ ಊಟ ಮಾಡಿ ನಂತರ ಆಸ್ಪತ್ರೆಗೆ ಬಂದವರು ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯವರು ಘೋಷಿಸಿದ್ದಾರೆ.

ಸಂಜೆಯಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಾರು ಜನ ಸೇರಿದ್ದರು. ಪೋಲಿಸರು ಆಸ್ಪತ್ರೆಗೆ ಭೇಟಿ ನೀಡಿದ್ದು ಇದೀಗ ಪುತ್ತೂರು ನಗರ ಠಾಣೆಗೆ ತೆರಳಿದ ಮೃತರ ಕಡೆಯವರು ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!