




ಹುಬ್ಬಳ್ಳಿಯಲ್ಲಿ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಶ್ವ ಮೇ 15ರ ಮುಂಜಾನೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ. ಸದ್ಯ ಶೋಧ ನಡೆಸಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ಹತ್ಯೆಯಾದ ಯುವತಿ ಅಂಜಲಿ (20) ಹಾಗೂ ಕೊಲೆಗೈದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ (21) ಎಂದು ಗುರುತಿಸಲಾಗಿದೆ.
ಅಂಜಲಿ ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಗಿರೀಶ ಸಾವಂತ ಬೆಂಗಳೂರಿನಿಂದ ದಾವಣಗೆರೆಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ರೈಲಿನಲ್ಲಿ ಬಾತ್ ರೂಂ ಗೆ ಹೋಗಿದ್ದ ಮಹಿಳೆಯೊಂದಿಗೆ ಕಿರಿಕ್ ಮಾಡಿದ ಗಿರೀಶ ಸಾವಂತ ಮಹಿಳೆಗೆ ಚಾಕು ಹಾಕಲು ಯತ್ನಿಸಿದ್ದ. ಈ ವೇಳೆ ಮಹಿಳೆ ಕೈಗೆ ಚಾಕುವಿಂದ ಗಾಯವಾಗಿದೆ. ಘಟನೆ ಕಂಡು ಮಹಿಳೆಯ ಪತಿ ಹಾಗೂ ಪ್ರಯಾಣಿಕರು ಆತನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದರು. ಜನರಿಂದ ತಪ್ಪಿಸಿಕೊಳ್ಳಲು ಹಳಿ ಮೇಲೆ ಜಿಗಿದಿದ್ದ. ಈ ವೇಳೆ ಆತನಿಗೆ ಮುಖ, ಕಾಲಿಗೆ ಗಂಭೀರ ಗಾಯವಾಗಿದೆ.
ಇನ್ನು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಆರೋಪಿಯನ್ನ ದಾವಣಗೆರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರಂತೆ. ಆರಂಭದಲ್ಲಿ ಅಂಜಲಿ ಕೊಲೆ ಆರೋಪಿ ಎಂದು ತಿಳಿದಿರಲಿಲ್ಲ ಎನ್ನಲಾಗಿದ್ದು, ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಯ ಗುರುತನ್ನು ದಾವಣಗೆರೆ ಪೊಲೀಸರು ಪತ್ತೆ ಮಾಡಿ ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದರಂತೆ. ಬಳಿಕ ಸ್ಥಳಕ್ಕೆ ಹೋಗಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಹುಬ್ಬಳ್ಳಿಗೆ ಕರೆತಂದಿದ್ದಾರೆ. ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಆರೋಪಿ ಗಿರೀಶ್ ಸಾವಂತ್ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ 2 ದಿನಗಳ ಹಿಂದೆ ಅಂಜಲಿ ಮನೆಗೇ ನುಗ್ಗಿ ಮದುವೆ ಮಾಡಿಕೊಡುವಂತೆ ಅಂಜಲಿ ಕುಟುಂಬಸ್ಥರ ಜೊತೆ ಜಗಳ ಆಡಿದ್ದ ವಿಶ್ವ, ಬಳಿಕ ಚಾಕುವಿನಿಂದ ಇರಿದು ಅಂಜಲಿಯನ್ನ ಕೊಲೆ ಮಾಡಿದ್ದ. ಅಂಜಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಳು. ಅಂಜಲಿ ಕೊಲೆಗೆ ರಾಜ್ಯಾಧ್ಯಂತ ಭಾರೀ ಖಂಡನೆ ವ್ಯಕ್ತವಾಗಿದೆ. ಆರೋಪಿಯನ್ನ ಬಂಧಿಸಲು ವಿಶೇಷ ತಂಡವನ್ನ ರಚನೆ ಮಾಡಲಾಗಿತ್ತು. ಕೊನೆಗೂ ಆರೋಪಿ ಸೆರೆಸಿಕ್ಕಿದ್ದಾನೆ. ಆರೋಪಿನ್ನ ಎನ್ಕೌಂಟರ್ ಮಾಡಿ ಇಲ್ಲ, ಗಲ್ಲಿಗೇರಿಸಿ ಅಂತ ಅಂಜಲಿ ಕುಟುಂಬಸ್ಥರು ಆಗ್ರಹ ಮಾಡ್ತಿದ್ದಾರೆ.