


ವೇಗವಾಗಿ ಬಂದ ಬಸ್ ಟ್ರ್ಯಾಕ್ಟರ್ ಟ್ರ್ಯಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಲಿಯಲ್ಲಿದ್ದ ನಾಲ್ವರು ಮೃತಪಟ್ಟಿದ್ದು, 9 ಜನರಿಗೆ ಗಂಭೀರ ಗಾಯಗೊಂಡ ಘಟನೆ ಕೊಪ್ಪಳದ ಹೊಸಲಿಂಗಾಪುರ ಬಳಿ ನಡೆದಿದೆ.
ನಿನ್ನೆ ರಾತ್ರಿ ಸುಮಾರು 8 ಗಂಟೆಗೆ ನಡೆದಿದ್ದ ಘಟನೆ ಇದಾಗಿದೆ. ಸಾವನ್ನಪ್ಪಿದವರು ಯಲಬುರ್ಗಾದ ಕರಮುಡಿ ಮೂಲದವರು ಎಂದು ಗುರುತಿಸಲಾಗಿದೆ.
ಒಂದೇ ಕುಟುಂಬದವರು ಯಲಬುರ್ಗಾದಿಂದ ಹುಲಿಗಿ ದರ್ಶನಕ್ಕೆ ಟ್ರ್ಯಾಕ್ಟರ್ನಲ್ಲಿ ಬಂದಿದ್ದರು. ದರ್ಶನ ಪಡೆದು ಮನೆಗೆ ಮರಳುವಾಗ ವೇಗವಾಗಿ ಬಂದ ಬಸ್ವೊಂದು ಟ್ರ್ಯಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿತ್ತು. ಸುಮಾರು 25 ಕ್ಕೂ ಹೆಚ್ಚು ಜನರು ಟ್ರ್ಯಾಕ್ಟರ್ನಲ್ಲಿ ಇದ್ದರು. ಅಪಘಾತ ಸಂಭವಿಸಿದಂತೆ ಬಸ್ ಚಾಲಕ ಪರಾರಿಯಾಗಿದ್ದಾನೆ.
ಸುಮಾರು 9 ಜನರಿಗೆ ಗಂಭೀರ ಗಾಯಗೊಂಡಿದ್ದು, ಕೂಡಲೇ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಭೇಟಿ ನೀಡಿದ್ದ ಎಸ್ಪಿ ಯಶೋಧಾ ವಂಟಗೋಡಿ. ಬಸ್ ಚಾಲಕನಿಂದ ಈ ಅಪಘಾತ ನಡೆದಿದೆ ಎಂದು ಹೇಳಿದ್ದಾರೆ. ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಇದ್ದವರು ಕೈಯಲ್ಲಿ ಸಿಗ್ನಲ್ ಮಾಡಿದ್ರು, ಆದರೂ ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಆಗಿದೆ. ಅಪಘಾತ ಹಿನ್ನೆಲೆ ರಾತ್ರಿಯೆಲ್ಲ ಟ್ರಾಫಿಕ್ ಜಾಮ್ ಆಗಿದೆ ಎಂದು ಹೇಳಿದ್ದಾರೆ.
ಪೊಲೀಸರು ಬಸ್, ಟ್ರ್ಯಾಕ್ಟರ್ ತೆರವುಗೊಳಿಸಲು ರಾತ್ರಿಯೆಲ್ಲ ಹರಸಹಾಸ ಪಟ್ಟಿದ್ದಾರೆ. ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ