Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಂಧನ; ಬೆಳ್ತಗಂಡಿ ಪೊಲೀಸ್ ಠಾಣೆಯಲ್ಲಿ ಬಂಧಿತರ ಬಿಡುಗಡೆಗೆ ಬೆಳಗ್ಗೆವರೆಗೆ ಶಾಸಕ ಹರೀಶ್ ಪೂಂಜಾ ಪ್ರತಿಭಟನೆ..!

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿಯ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲಿನ ಕೋರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾ‌ರ್ ಮತ್ತು ಬೆಳ್ತಂಗಡಿ ಪೊಲೀಸರ ತಂಡ ಜಂಟಿ ಕಾರ್ಯಾಚರಣೆಯಲ್ಲಿ ದಾಳಿ ನಡೆಸಿದ್ದು ಸ್ಪೋಟಕಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಂಡದ್ದಲ್ಲದೆ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.

ಈ ಕಲ್ಲಿನಕೋರೆ ಯಾವುದೇ ಸಮರ್ಪಕವಾದ ದಾಖಲೆಗಳಿಲ್ಲದೆ ನಡೆಯುತ್ತಿತ್ತು. ಈ ಕಲ್ಲಿನ ಕೋರೆಯನ್ನು ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬವರು ನಡೆಸುತ್ತಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿದ್ದಾರೆ.

ದಾಳಿಯ ವೇಳೆ ಒಂದು ಹಿಟಾಚಿ, ಒಂದು ಕಂಪ್ರೆಸರ್ ಮೆಷಿನ್, ಒಂದು ಕಾರನ್ನು ಹಾಗೂ ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ಕೆಲವು ಸಮಯಗಳಿಂದ ಇಲ್ಲಿ ಕಲ್ಲಿನ ಕೋರೆ ಅಕ್ರಮವಾಗಿ ನಡೆಯುತ್ತಿದ್ದು ಈ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ತಹಶೀಲ್ದಾರರು ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಲಾಗಿದೆ

ಕಲ್ಲಿನ ಕೋರೆಯನ್ನು ನಡೆಸುತ್ತಿದ್ದಾರೆ ಎನ್ನಲಾಗಿರುವ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ರಾತ್ರಿಯ ವೇಳೆ ಪೊಲೀಸರು ಬಂಧಿಸಿದ್ದಾರೆ. ಯುವ ಮೋರ್ಚಾ ಅಧ್ಯಕ್ಷ ಹಾಗೂ ಶಾಸಕರ ಆಪ್ತನ ಬಂಧನದ ಬಗ್ಗೆ ಮಾಹಿತಿ ತಿಳಿದು ತಡ ರಾತ್ರಿಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜಾರು ಬಂಧಿತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಪೊಲೀಸರು ಬಿಡುಗಡೆ ಮಾಡದಿದ್ದಾಗ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನನ್ನದು ಸರಕಾರ ಬರುತ್ತದೆ ನೋಡ್ಕೊತ್ತಿನಿ ಎಂದು ಪೊಲೀಸ್ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಠಾಣೆಯ ಒಳಗೆ ನೆಲದಲ್ಲಿ ಕುಳಿತ ಶಾಸಕರು ಬಂಧಿತರನ್ನು ಬಿಡುಗಡೆ ಮಾಡುವವರೆಗೆ ಎದ್ದೇಳುವುದಿಲ್ಲ ಎಂದು ಪ್ರತಿಭಟಿಸಿದರು. ಹರೀಶ್ ಪೂಂಜಾ ಮಾತನಾಡಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ರಾತ್ರಿ ಮನೆಗೆ ನುಗ್ಗಿ ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿದ ಶಾಸಕರು ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಪಕ್ಷದ ಕಾರ್ಯಕರ್ತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.

ಸರಕಾರದ ಪೊಲೀಸರ ಈ ನೀತಿಯ ವಿರುದ್ದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಬೆಳಗ್ಗೆ ಜಾವ 4 ಗಂಟೆಯವರೆಗೆ ಕೆಲ ಕಾರ್ಯಕರ್ತರ ಜೊತೆ ಠಾಣೆಯ ಹೊರಗೆ ಕುಳಿತ ಹರೀಶ್ ಪೂಂಜಾರು ಬಂಧಿತರು ಬಿಡುಗಡೆ ಆಗದಿದ್ದಾಗ ಪ್ರತಿಭಟನೆ ನಿಲ್ಲಿಸಿ ಎದ್ದು ಹೋದರು. ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಇತರರು ಇದ್ದರು.

- Advertisement -

Related news

error: Content is protected !!