- Advertisement -
- Advertisement -




ಬಾಗಲಕೋಟೆ: ಕೆರೆಯಲ್ಲಿ ಈಜಲು ತೆರೆಳಿದ್ದ 6 ಬಾಲಕರು ಪೈಕಿ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಬನಹಟ್ಟಿ ಎಂಬಲ್ಲಿ ನಡೆದಿದೆ.
ಮೃತ ಬಾಲಕರನ್ನು ಸಂಜಯ್ ಲಕ್ಷ್ಮಣ ತಳವಾರ್ (13), ಸಮರ್ಥ ಸದಾಶಿವ ತಳವಾರ್ (10) ಎಂದು ಗುರುತಿಸಲಾಗಿದೆ.
ಸಂಜಯ್ ಹಾಗೂ ಸಮರ್ಥ ಈಜಲು ಕೆರೆ ಬಳಿ ಹೋಗಿದ್ದಾರೆ. ಈ ವೇಳೆ ಸಮರ್ಥ್ ನೀರಿನಿಂದ ಹೊರಬರಲು ಆಗದೆ ಪರದಾಡಿದ್ದಾನೆ. ಇದನ್ನು ಗಮನಿಸಿದ ಸಂಜಯ್ ಮುಳುಗುತ್ತಿದ್ದ ಸಮರ್ಥ್ನನ್ನು ಹಿಡಿಯಲು ಹೋಗಿದ್ದಾನೆ. ಆದರೆ ಇಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಾಯದಿಂದ ಪೊಲೀಸರು ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
- Advertisement -