Saturday, June 28, 2025
spot_imgspot_img
spot_imgspot_img

ಕುಂದಾಪುರ: ವರ್ಗಾವಣೆ ಪ್ರಮಾಣ ಪತ್ರ ನೀಡಲು ಶಾಲೆ ನಿರಾಕರಣೆ; ಡೆತ್‌ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ..!

- Advertisement -
- Advertisement -

ಕುಂದಾಪುರ: ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡದೇ ಬೈದರೆಂದು ಬೇಸರಗೊಂಡ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಸೋಮವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ವಿದ್ಯಾರ್ಥಿನಿತಿನ್ ಆಚಾರಿ (16) ಎಂದು ಗುರುತಿಸಲಾಗಿದೆ.

ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ ವಿದ್ಯಾರ್ಥಿ ನಿತಿನ್, ಮುಖ್ಯ ಶಿಕ್ಷಕರು ಬೈದಿದ್ದಾರೆ ಎಂದು ಡೆತ್‌ ನೋಟ್ ಬರೆದಿಟ್ಟು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಕೊಂಡಿದ್ದಾನೆ.ಶಾಲೆಯಲ್ಲಿ ಬೈದ್ದಿದ್ದಾರೆ ಎನ್ನುವ ಕಾರಣಕ್ಕೆ ಬೇಸರಗೊಂಡು ನಿತಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರ ಆರೋಪವಾಗಿದೆ. ಈ ಬಗ್ಗೆ ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!