Sunday, June 29, 2025
spot_imgspot_img
spot_imgspot_img

ಆಕಸ್ಮಿಕವಾಗಿ ಗುಂಡು ತಗುಲಿ ಯೋಧ ಮೃತ್ಯು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಆಕಸ್ಮಿಕವಾಗಿ ತಮ್ಮದೇ ಸರ್ವಿಸ್ ರೈಫಲ್​ನಿಂದ ಗುಂಡು ತಗುಲಿ ಯೋಧರೋರ್ವರು ಸಾವನ್ನಪ್ಪಿದ ಘಟನೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ರಾಯಚೂರು, ಮಾನ್ವಿ ತಾಲೂಕಿನ ಆರ್​ಜಿ ಕ್ಯಾಂಪ್‌ ಸಿಐಎಸ್​ಎಫ್ ಯೋಧ ರವಿಕಿರಣ್ (37) ಮೃತ ಯೋಧ

ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್​ಎಫ್) ಯೋಧ ರವಿಕಿರಣ್ ಗೆ ಸೋಮವಾರ (ಮೇ 20) ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ತಮ್ಮದೇ ಸರ್ವಿಸ್ ರೈಫಲ್​ನಿಂದ ಸಿಡಿದ ಗುಂಡು ತಾಗಿ ತೀವ್ರವಾಗಿ​ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯೋಧ ರವಿಕಿರಣ ಮೃತಪಟ್ಟಿದ್ದಾರೆ.

ಯೋಧ ರವಿಕಿರಣ್​ ರ ಪಾರ್ಥಿವ ಶರೀರ ಇಂದು (ಮೇ 21) ಆರ್​ಜಿ ಕ್ಯಾಂಪ್​ಗೆ ತಲುಪಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮಾನ್ವಿ ಪಟ್ಟಣದ ಆರ್​ಜಿ ಕ್ಯಾಂಪ್​ನಲ್ಲಿ ಯೋಧನ ಅಂತ್ಯಕ್ರಿಯೆ ನೆರವೇರಿದೆ. ಯೋಧ ರವಿಕಿರಣ್​ ಅಂತ್ಯಕ್ರಿಯೆಯಲ್ಲಿ ಮಾನ್ವಿ ಶಾಸಕ ಹಂಪಯ್ಯ ನಾಯಕ್ ಮತ್ತು ಗ್ರಾಮಸ್ಥರು ಯೋಧನಿಗೆ ಅಂತಿಮ‌ ನಮನ ಸಮರ್ಪಿಸಿದರು.

- Advertisement -

Related news

error: Content is protected !!