Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರನ್ನು ಬಂಧಿಸಿದರೆ ದ.ಕ. ಜಿಲ್ಲೆ ಬಂದ್‌: ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಬೆಳ್ತಂಗಡಿ: ಬಿಜೆಪಿ ತಾಲೂಕು ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರನ್ನು ಅಕ್ರಮ ಕಲ್ಲು ಕೋರೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜ ಮೇ 18ರಂದು ರಾತ್ರಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ತೆರಳಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಎಫ್‌ಐಆರ್ ದಾಖಲಾಗಿತ್ತು. ಹಾಗೂ ಮೇ 21ರಂದು ಪ್ರತಿಭಟನೆ ನಡೆದ ದಿನ ಪೊಲೀಸರಿಗೆ ಬೆದರಿಕೆ ಒಡ್ಡಿರುವ ಕುರಿತು ಇನ್ನೊಂದು ಪ್ರಕರಣ ದಾಖಲಾಗಿತ್ತು.

ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ ನೀಡಿದ ಸಂಸದ ಕಟೀಲ್ ಅವರು ಮಾತನಾಡಿ, ಶಾಸಕರು ಕಾನೂನಿಗೆ ಗೌರವ ಕೊಟ್ಟು ನೋಟೀಸು ತೆಗೆದುಕೊಂಡಿದ್ದಾರೆ. ಕಾನೂನಿಗೆ ಗೌರವ ಕೊಟ್ಟು ಪ್ರಕ್ರಿಯೆಯನ್ನು ಪೊಲೀಸರು ಮಾಡಬೇಕು, ಐದು ದಿನ ಕಾಲವಕಾಶವನ್ನು ಕೇಳಿದ್ದಾರೆ. ಶಾಸಕರ ಮೇಲೆ ಪೊಲೀಸರು ಒತ್ತಡ ಹಾಕಿ ಬಂಧಿಸಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.

ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ರಾಜ್ಯದಲ್ಲಿ ಸರಕಾರ ಮಾಡುತ್ತಿದೆ. ಶಾಸಕರನ್ನು ಮಟ್ಟ ಹಾಕಲು ಬಂಧಿಸಲು ಮುಂದಾಗಿದೆ ಉತ್ತರ ಕೊಡುತ್ತೇವೆ. ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ಸರಕಾರ ಮಾಡುತ್ತಿದೆ. ಮಾಡಿದೆ. ಇದು ಸಂವಿಧಾನ ವಿರೋಧಿ ಕೆಲಸ. ಸಿದ್ದರಾಮಯ್ಯ ಮೇಲೆ ಕೇಸು ಆಗಿದೆ ಯಾರೂ ನೋಟಿಸು ನೀಡಿಲ್ಲ ನನ್ನ ಮೇಲೆ ಮೂರು ಕೇಸು ಇತ್ತು ಯಾರೂ ನೋಟಿಸು ನೀಡಿಲ್ಲ, ನಿರಾಪರಾಧಿಗಳ ಮೇಲೆ ಈ ರೀತಿ ಕೇಸು ಹಾಕುವುದು ಸರಿಯಲ್ಲ ರಾಜಕೀಯ ಪ್ರೇರಿತವಾಗಿ ಪೊಲೀಸರು ಬಂಧಿಸುವ ಕಾರ್ಯ ಮಾಡಬಾರದು ಎಂದು ತಿಳಿಸಿದರು..

ಹರೀಶ್ ಪೂಂಜ ಅವರನ್ನು ಕಾನೂನು ಮೀರಿ ಬಂಧಿಸಿದರೆ ನಾಳೆ ದ.ಕ.ಜಿಲ್ಲೆ ಬಂದ್ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ಶಾಸಕರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಶಾಸಕರನ್ನು ಬಂಧಿಸುವ ದುಸ್ಸಾಹಸಕ್ಕೆ ಪೊಲೀಸರು ಕೈಹಾಕಬಾರದು ಎಂದು ಎಚ್ಚರಿಕೆ ನೀಡಿದರು.

- Advertisement -

Related news

error: Content is protected !!